ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೇಕಲ್‌ನಲ್ಲಿ ಕಾರು ಡಿಕ್ಕಿ: ವ್ಯಕ್ತಿ ಸಾವು, ಶವವಿಟ್ಟು ಪ್ರತಿಭಟನೆ

Last Updated 22 ಮೇ 2019, 19:30 IST
ಅಕ್ಷರ ಗಾತ್ರ

ಆನೇಕಲ್:ಅಲಯನ್ಸ್‌ ವಿಶ್ವವಿದ್ಯಾಲಯದ ವಿದ್ಯಾರ್ಥಿಗೆ ಸೇರಿದ ಕಾರೊಂದು ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದಿದ್ದರಿಂದ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ಕುಟುಂಬದವರು ಅಲಯನ್ಸ್‌ ವಿವಿ ಮುಂದೆ ಶವವಿಟ್ಟು ಪ್ರತಿಭಟನೆ ಮಾಡಿದರು.

ತಾಲ್ಲೂಕಿನ ಆವಡದೇನಹಳ್ಳಿಯ ಮುನಿರಾಜು (26), ಬಸ್ ನಿಲ್ದಾಣದ ಬಳಿ ನಿಂತಿದ್ದಾಗ ಬಂದ ಅಲಯನ್ಸ್‌ ವಿವಿ ವಿದ್ಯಾರ್ಥಿಯ ಕಾರೊಂದು ಡಿಕ್ಕಿ ಹೊಡೆದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಮುನಿರಾಜು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರು ಬುಧವಾರ ಮೃತಪಟ್ಟರು. ಸ್ಥಳೀಯರು ಹಾಗೂ ಕುಟುಂಬದವರು ಶವದೊಂದಿಗೆ ಪ್ರತಿಭಟನೆ ನಡೆಸಿದರು.

ಈ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಬೇಜವಾಬ್ದಾರಿಯಿಂದ ಈ ಭಾಗದಲ್ಲಿ ಅಪಘಾತಗಳು ಸಂಭವಿಸುತ್ತಿವೆ. ಸಂಬಂಧಿಸಿದವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಆಡಳಿತ ಮಂಡಳಿಯವರು ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಶವ ತೆರವುಗೊಳಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT