‘ಅಜಿತಾಬ್ ನಾಪತ್ತೆಯಾದ ದಿನ, ಶಂಕಿತ ಆರೋಪಿಯ ಸಿಮ್ ಕೋರಮಂಗಲದ ಮಲ್ಲಪ್ಪ ರೆಡ್ಡಿ ಲೇಔಟ್, ಸಿಲ್ಕ್ಬೋರ್ಡ್, ಬೇಗೂರು, ಜಯನಗರ, ವರ್ತೂರು, ಗುಂಜೂರು ಸುತ್ತಮುತ್ತಲ ಟವರ್ಗಳಿಂದ ಸಂಪರ್ಕ ಪಡೆದಿತ್ತು. ಅಜಿತಾಬ್ ಮೊಬೈಲ್ ಸ್ವಿಚ್ಡ್ಆಫ್ ಆಗಿದ್ದೂ ಗುಂಜೂರು ಕೆರೆ ಸಮೀಪವೇ. ಇದನ್ನು ಗಮನಿಸಿದರೆ ಶಂಕಿತ ಆರೋಪಿ ಅಲ್ಲಿಂದಲೇ ಅವರನ್ನು ಅಪಹರಿಸಿರುವುದು
ಸ್ಪಷ್ಟವಾಗುತ್ತದೆ ಎಂದು ಪೊಲೀಸರು ಹೇಳಿದ್ದರು.