ಕೆಲವು ವಿಶ್ವವಿದ್ಯಾಲಯಗಳು ಪ್ರತಿ ವರ್ಷ ಘಟಿಕೋತ್ಸವ ಆಯೋಜಿಸದೆ ಇರುವುದು ಸರಿಯಲ್ಲ. ಇನ್ನು ಮುಂದೆ ನಿಯಮಿತವಾಗಿ ಘಟಿಕೋತ್ಸವ ಕಾರ್ಯಕ್ರಮ ಏರ್ಪಡಿಸಿ ಪದವೀಧರರಿಗೆ ಪ್ರಮಾಣ ಪತ್ರಗಳನ್ನು ನೀಡಬೇಕು. ಇದರಿಂದ ಅವರನ್ನು ಗೌರವಿಸಿದಂತೆ ಆಗುತ್ತದೆ. ಅಲ್ಲದೆ ಅವರ ಕುಟುಂಬದವರಿಗೂ ಇದು ಹೆಮ್ಮೆಯ ಕ್ಷಣ ಎಂದು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.