ಸ್ಥಳೀಯ ನಿವಾಸಿಯಾದ ಪ್ರಜ್ವಲ್, ಭಾನುವಾರ ಬೆಳಿಗ್ಗೆಮನೆಯ ಕಸವನ್ನು ಸಮೀಪದ ತೊಟ್ಟಿಗೆ ಹಾಕಿ ವಾಪಸ್ ನಡೆದುಕೊಂಡು ಹೋಗುತ್ತಿದ್ದರು. ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿದ್ದರು. ಅವರ 16 ಗ್ರಾಂ ಚಿನ್ನದ ಸರ, ಕೈಯಲ್ಲಿದ್ದ ಬ್ರೇಸ್ಲೆಟ್ ಹಾಗೂ 5 ಗ್ರಾಂ ಚಿನ್ನದ ಉಂಗುರ ಕಿತ್ತುಕೊಂಡು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಗಿರಿನಗರ ಪೊಲೀಸರು ಹೇಳಿದರು.