ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವೇಗೌಡರ ಹೇಳಿಕೆ ಸತ್ಯ: ಚಲುವರಾಯಸ್ವಾಮಿ

Last Updated 21 ಜೂನ್ 2019, 13:32 IST
ಅಕ್ಷರ ಗಾತ್ರ

ಮಂಡ್ಯ: ‘ಮಧ್ಯಂತರ ಚುನಾವಣೆ ಕುರಿತು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ನೀಡಿರುವ ಹೇಳಿಕೆ ಸತ್ಯ ಇರಬಹುದು. ಅವರು ಹೇಳಿದ್ದಾರೆ ಎಂದರೆ ಅದನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಕಾಂಗ್ರೆಸ್‌ ಮುಖಂಡ ಎನ್‌.ಚಲುವರಾಯಸ್ವಾಮಿ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಎಲ್ಲಾ ಪಕ್ಷಗಳು ಇಂದು ರಾಜಕಾರಣದಲ್ಲಿ ಮುಳುಗಿವೆ. ಇದೆಲ್ಲವನ್ನು ನೋಡಿದರೆ ಜನರು ಒಂದು ಪಕ್ಷಕ್ಕೆ ಅಧಿಕಾರ ನೀಡಲು ತೀರ್ಮಾನಿಸಿದಂತೆ ಕಾಣುತ್ತಿದೆ. ರಾಜ್ಯ ರಾಜಕಾರಣ ಇಂದು ಕವಲು ದಾರಿಯಲ್ಲಿದೆ. ಮೈತ್ರಿ ಸರ್ಕಾರದಿಂದ ಜೆಡಿಎಸ್‌ಗೆ ಲಾಭವಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿದರೆ ಸರ್ಕಾರ ಉಳಿಯುತ್ತದೆ, ಇಲ್ಲದಿದ್ದರೆ ಕಷ್ಟ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಉದ್ದೇಶದಿಂದ 37 ಸೀಟು ಗೆದ್ದವರಿಗೆ ಕಾಂಗ್ರೆಸ್‌ ಅಧಿಕಾರ ನೀಡಿದೆ. ಇದನ್ನು ಅರಿತು ಸರ್ಕಾರ ಸಮನ್ವಯತೆಯಿಂದ ಮುನ್ನಡೆಯಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT