<p><strong>ಬೆಂಗಳೂರು:</strong> ಬೇಸಿಗೆ ಮುಗಿದು ಮಳೆಗಾಲ ಆರಂಭವಾಗುವ ಸಂದರ್ಭದಲ್ಲಿ ಸಾಮಾನ್ಯವಾಗಿ ಹರಡುವ ಅತಿಸಾರ ಭೇದಿಯನ್ನು ತಡೆಗಟ್ಟಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಂಕ್ ಗುಳಿಗೆ ಮತ್ತು ಒಆರ್ಎಸ್ ವಿತರಣೆಯ ಪಾಕ್ಷಿಕ ಆರಂಭಿಸಿದೆ.</p>.<p>ಸೋಮವಾರ ಇಲ್ಲಿ ನಡೆದ ಅತಿಸಾರ ನಿಯಂತ್ರಣ ಪಾಕ್ಷಿಕವನ್ನು ಉದ್ಘಾಟಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್, ‘ ಅತಿಸಾರಭೇದಿಯ ಸಮಸ್ಯೆಗೆ ಬಡವರ್ಗದ, ಗುಡ್ಡಗಾಡು ಪ್ರದೇಶದ ಮಕ್ಕಳು ಹೆಚ್ಚು ಬಲಿಯಾಗುತ್ತಿದ್ದಾರೆ. ಐದು ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣದಲ್ಲಿ ಶೇ 10ರಷ್ಟು ಇದೇ ಕಾರಣದಿಂದ ಆಗುತ್ತಿದೆ. ಮಕ್ಕಳ ಆರೋಗ್ಯ ಕಾಪಾಡಲು ಮುನ್ನೆಚ್ಚರಿಕೆ ಯೇ ಮದ್ದು’ ಎಂದರು.</p>.<p>ಪಾಕ್ಷಿಕ ಅವಧಿಯಲ್ಲಿ ರಾಜ್ಯದಾದ್ಯಂತ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಒಆರ್ಎಸ್ ಮತ್ತು ಜಿಂಕ್ ಗುಳಿಗೆ ವಿತರಿಸಲಿದ್ದಾರೆ. ಪ್ರತಿ ಮನೆಗೆ ತೆರಳಿ ತಾಯಂದಿರಿಗೆ ಕೂಡ ಸ್ವಚ್ಛತೆ ಮತ್ತು ಅತಿಸಾರ ನಿಯಂತ್ರಣ ವಿಧಾನಗಳ ಮಾಹಿತಿ ನೀಡಲಿದ್ದಾರೆ ಎಂದರು.</p>.<p>ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಜಿಲ್ಲಾ ಆಸ್ಪತ್ರೆ ಮತ್ತು ವೈದ್ಯಕೀಯ ವಿಶ್ವವಿದ್ಯಾಲಯಗಳಲ್ಲಿ ಹೊರರೋಗಿ ಮತ್ತು ಒಳಗರೋಗಿ ವಿಭಾಗಗಳಲ್ಲಿ ಒಆರ್ಎಸ್ ಮತ್ತು ಜಿಂಕ್ ಕೇಂದ್ರಗಳನ್ನು ತೆರೆಯಲಾಗು<br />ವುದು. ಅತಿ ಸೂಕ್ಷ್ಮ ಪ್ರದೇಶಗಳಿಗೆ ಸಂಚಾರಿ ತಂಡಗಳನ್ನು ಕಳುಹಿಸಿ ಮಾಹಿತಿ ನೀಡಲಾಗುವುದು ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೇಸಿಗೆ ಮುಗಿದು ಮಳೆಗಾಲ ಆರಂಭವಾಗುವ ಸಂದರ್ಭದಲ್ಲಿ ಸಾಮಾನ್ಯವಾಗಿ ಹರಡುವ ಅತಿಸಾರ ಭೇದಿಯನ್ನು ತಡೆಗಟ್ಟಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಂಕ್ ಗುಳಿಗೆ ಮತ್ತು ಒಆರ್ಎಸ್ ವಿತರಣೆಯ ಪಾಕ್ಷಿಕ ಆರಂಭಿಸಿದೆ.</p>.<p>ಸೋಮವಾರ ಇಲ್ಲಿ ನಡೆದ ಅತಿಸಾರ ನಿಯಂತ್ರಣ ಪಾಕ್ಷಿಕವನ್ನು ಉದ್ಘಾಟಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್, ‘ ಅತಿಸಾರಭೇದಿಯ ಸಮಸ್ಯೆಗೆ ಬಡವರ್ಗದ, ಗುಡ್ಡಗಾಡು ಪ್ರದೇಶದ ಮಕ್ಕಳು ಹೆಚ್ಚು ಬಲಿಯಾಗುತ್ತಿದ್ದಾರೆ. ಐದು ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣದಲ್ಲಿ ಶೇ 10ರಷ್ಟು ಇದೇ ಕಾರಣದಿಂದ ಆಗುತ್ತಿದೆ. ಮಕ್ಕಳ ಆರೋಗ್ಯ ಕಾಪಾಡಲು ಮುನ್ನೆಚ್ಚರಿಕೆ ಯೇ ಮದ್ದು’ ಎಂದರು.</p>.<p>ಪಾಕ್ಷಿಕ ಅವಧಿಯಲ್ಲಿ ರಾಜ್ಯದಾದ್ಯಂತ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಒಆರ್ಎಸ್ ಮತ್ತು ಜಿಂಕ್ ಗುಳಿಗೆ ವಿತರಿಸಲಿದ್ದಾರೆ. ಪ್ರತಿ ಮನೆಗೆ ತೆರಳಿ ತಾಯಂದಿರಿಗೆ ಕೂಡ ಸ್ವಚ್ಛತೆ ಮತ್ತು ಅತಿಸಾರ ನಿಯಂತ್ರಣ ವಿಧಾನಗಳ ಮಾಹಿತಿ ನೀಡಲಿದ್ದಾರೆ ಎಂದರು.</p>.<p>ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಜಿಲ್ಲಾ ಆಸ್ಪತ್ರೆ ಮತ್ತು ವೈದ್ಯಕೀಯ ವಿಶ್ವವಿದ್ಯಾಲಯಗಳಲ್ಲಿ ಹೊರರೋಗಿ ಮತ್ತು ಒಳಗರೋಗಿ ವಿಭಾಗಗಳಲ್ಲಿ ಒಆರ್ಎಸ್ ಮತ್ತು ಜಿಂಕ್ ಕೇಂದ್ರಗಳನ್ನು ತೆರೆಯಲಾಗು<br />ವುದು. ಅತಿ ಸೂಕ್ಷ್ಮ ಪ್ರದೇಶಗಳಿಗೆ ಸಂಚಾರಿ ತಂಡಗಳನ್ನು ಕಳುಹಿಸಿ ಮಾಹಿತಿ ನೀಡಲಾಗುವುದು ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>