ಸೋಮವಾರ ಇಲ್ಲಿ ನಡೆದ ಅತಿಸಾರ ನಿಯಂತ್ರಣ ಪಾಕ್ಷಿಕವನ್ನು ಉದ್ಘಾಟಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್, ‘ ಅತಿಸಾರಭೇದಿಯ ಸಮಸ್ಯೆಗೆ ಬಡವರ್ಗದ, ಗುಡ್ಡಗಾಡು ಪ್ರದೇಶದ ಮಕ್ಕಳು ಹೆಚ್ಚು ಬಲಿಯಾಗುತ್ತಿದ್ದಾರೆ. ಐದು ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣದಲ್ಲಿ ಶೇ 10ರಷ್ಟು ಇದೇ ಕಾರಣದಿಂದ ಆಗುತ್ತಿದೆ. ಮಕ್ಕಳ ಆರೋಗ್ಯ ಕಾಪಾಡಲು ಮುನ್ನೆಚ್ಚರಿಕೆ ಯೇ ಮದ್ದು’ ಎಂದರು.