<p><strong>ಬೆಂಗಳೂರು: </strong>ಅಲ್ಲಿ ಚಿಣ್ಣರು ಮಣ್ಣಿನಿಂದ ವಿವಿಧ ಮಾದರಿಗಳನ್ನು ತಯಾರಿಸಿದರು, ಬೆಂಕಿ ಬಳಸದೆಯೇ ಆಹಾರ ಸಿದ್ಧಪಡಿಸಿದರು, ಕತೆ ಹೇಳಿದರು, ನಲಿದರು, ಕುಣಿದರು... ಅಲ್ಲಿ ಸೇರಿದ್ದ ಮಕ್ಕಳ ಸಡಗರಕ್ಕೆ ಪಾರವೇ ಇರಲಿಲ್ಲ.</p>.<p>ಎಳೆಯರ ವಿವಿಧ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿದ್ದು ಯೂತ್ ಫಾರ್ ಸೇವಾ ಸಂಸ್ಥೆಯು ಏರ್ಪಡಿಸಿದ್ದ ‘ಚಿಗುರು’ ಅಂತರ ಶಾಲಾ ಸಾಂಸ್ಕೃತಿಕ ಉತ್ಸವ. ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗಾಗಿ ನಗರದ ವಿಜಯ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳು ಮಕ್ಕಳ ಪ್ರತಿಭೆಗಳನ್ನು ಒರೆಗೆ ಹಚ್ಚಿದವು.</p>.<p>ಕಾರ್ಯಕ್ರಮದಲ್ಲಿ ಬಾಲಕರು ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ ಕೊಲಾಜ್, ಕಿರಿಯ ವಿಜ್ಞಾನಿ, ಮಣ್ಣಿನ ಮಾದರಿ, ಬೆಂಕಿರಹಿತ ಅಡುಗೆ, ಕಸದಿಂದ ರಸ, ಪ್ರತಿಭಾನ್ವೇಷಣೆ, ಕ್ರಿಯಾಶೀಲ ಬರವಣಿಗೆ, ಪ್ರಬಂಧ, ಕತೆ, ನೃತ್ಯ, ಯೋಗ, ರಸಪ್ರಶ್ನೆ, ಗುಂಪು ಹಾಡುಗಾರಿಕೆ, ವಾಚನ, ಭಾಷಣಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.</p>.<p>ನಗರದ 100ಕ್ಕೂ ಹೆಚ್ಚು ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 3 ಸಾವಿರ ವಿದ್ಯಾರ್ಥಿಗಳು ಸ್ಪರ್ಧೆ<br />ಗಳಲ್ಲಿ ಭಾಗವಹಿಸಿದರು. ವಿಭಾಗವಾರುಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಸ್ಥಳದಲ್ಲೇ ಪ್ರಮಾಣಪತ್ರ ಹಾಗೂ ಪ್ರಶಸ್ತಿಗಳನ್ನು ವಿತರಿಸಲಾಯಿತು.</p>.<p>‘ಪ್ರತಿ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೇ ಇರುತ್ತದೆ. ಎಲ್ಲರ ಬೆರಳಚ್ಚುಗಳಲ್ಲಿ ವ್ಯತ್ಯಾಸಗಳಿರುವಂತೆ ವಿದ್ಯಾರ್ಥಿಗಳ ಪ್ರತಿಭೆಗಳಲ್ಲೂ ವೈವಿಧ್ಯ ಇರುತ್ತದೆ’ ಎಂದು ಸಂಸದ ತೇಜಸ್ವಿ ಸೂರ್ಯ ಅಭಿಪ್ರಾಯಪಟ್ಟರು.</p>.<p>ಯೂತ್ ಫಾರ್ ಸೇವಾ ಸಂಸ್ಥೆಯ ಸ್ವಯಂಸೇವಕ ರೋಹಿತ್, ‘ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತಹಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದೇವೆ. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಒಂದು ಸೃಜನಶೀಲ ವೇದಿಕೆ ಕಲ್ಪಿಸುವುದು ನಮ್ಮ ಉದ್ದೇಶ’ ಎಂದರು.</p>.<p>‘ಮೂರು ರಾಜ್ಯಗಳ 15 ಪ್ರಮುಖ ನಗರಗಳಲ್ಲಿ ಇಂದು ಚಿಗುರು ಕಾರ್ಯಕ್ರಮ ನಡೆದಿದೆ. ಸ್ವಯಂಸೇವಕರೇ ವಿವಿಧ ಶಾಲೆಗಳಿಗೆ ತೆರಳಿ ಒಂದು ತಿಂಗಳಿನಿಂದವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅಲ್ಲಿ ಚಿಣ್ಣರು ಮಣ್ಣಿನಿಂದ ವಿವಿಧ ಮಾದರಿಗಳನ್ನು ತಯಾರಿಸಿದರು, ಬೆಂಕಿ ಬಳಸದೆಯೇ ಆಹಾರ ಸಿದ್ಧಪಡಿಸಿದರು, ಕತೆ ಹೇಳಿದರು, ನಲಿದರು, ಕುಣಿದರು... ಅಲ್ಲಿ ಸೇರಿದ್ದ ಮಕ್ಕಳ ಸಡಗರಕ್ಕೆ ಪಾರವೇ ಇರಲಿಲ್ಲ.</p>.<p>ಎಳೆಯರ ವಿವಿಧ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿದ್ದು ಯೂತ್ ಫಾರ್ ಸೇವಾ ಸಂಸ್ಥೆಯು ಏರ್ಪಡಿಸಿದ್ದ ‘ಚಿಗುರು’ ಅಂತರ ಶಾಲಾ ಸಾಂಸ್ಕೃತಿಕ ಉತ್ಸವ. ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗಾಗಿ ನಗರದ ವಿಜಯ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳು ಮಕ್ಕಳ ಪ್ರತಿಭೆಗಳನ್ನು ಒರೆಗೆ ಹಚ್ಚಿದವು.</p>.<p>ಕಾರ್ಯಕ್ರಮದಲ್ಲಿ ಬಾಲಕರು ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ ಕೊಲಾಜ್, ಕಿರಿಯ ವಿಜ್ಞಾನಿ, ಮಣ್ಣಿನ ಮಾದರಿ, ಬೆಂಕಿರಹಿತ ಅಡುಗೆ, ಕಸದಿಂದ ರಸ, ಪ್ರತಿಭಾನ್ವೇಷಣೆ, ಕ್ರಿಯಾಶೀಲ ಬರವಣಿಗೆ, ಪ್ರಬಂಧ, ಕತೆ, ನೃತ್ಯ, ಯೋಗ, ರಸಪ್ರಶ್ನೆ, ಗುಂಪು ಹಾಡುಗಾರಿಕೆ, ವಾಚನ, ಭಾಷಣಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.</p>.<p>ನಗರದ 100ಕ್ಕೂ ಹೆಚ್ಚು ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 3 ಸಾವಿರ ವಿದ್ಯಾರ್ಥಿಗಳು ಸ್ಪರ್ಧೆ<br />ಗಳಲ್ಲಿ ಭಾಗವಹಿಸಿದರು. ವಿಭಾಗವಾರುಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಸ್ಥಳದಲ್ಲೇ ಪ್ರಮಾಣಪತ್ರ ಹಾಗೂ ಪ್ರಶಸ್ತಿಗಳನ್ನು ವಿತರಿಸಲಾಯಿತು.</p>.<p>‘ಪ್ರತಿ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೇ ಇರುತ್ತದೆ. ಎಲ್ಲರ ಬೆರಳಚ್ಚುಗಳಲ್ಲಿ ವ್ಯತ್ಯಾಸಗಳಿರುವಂತೆ ವಿದ್ಯಾರ್ಥಿಗಳ ಪ್ರತಿಭೆಗಳಲ್ಲೂ ವೈವಿಧ್ಯ ಇರುತ್ತದೆ’ ಎಂದು ಸಂಸದ ತೇಜಸ್ವಿ ಸೂರ್ಯ ಅಭಿಪ್ರಾಯಪಟ್ಟರು.</p>.<p>ಯೂತ್ ಫಾರ್ ಸೇವಾ ಸಂಸ್ಥೆಯ ಸ್ವಯಂಸೇವಕ ರೋಹಿತ್, ‘ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತಹಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದೇವೆ. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಒಂದು ಸೃಜನಶೀಲ ವೇದಿಕೆ ಕಲ್ಪಿಸುವುದು ನಮ್ಮ ಉದ್ದೇಶ’ ಎಂದರು.</p>.<p>‘ಮೂರು ರಾಜ್ಯಗಳ 15 ಪ್ರಮುಖ ನಗರಗಳಲ್ಲಿ ಇಂದು ಚಿಗುರು ಕಾರ್ಯಕ್ರಮ ನಡೆದಿದೆ. ಸ್ವಯಂಸೇವಕರೇ ವಿವಿಧ ಶಾಲೆಗಳಿಗೆ ತೆರಳಿ ಒಂದು ತಿಂಗಳಿನಿಂದವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>