ಭಾರತ ಸರ್ಕಾರದ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗಕ್ಕಾಗಿ ಪ್ರೊ.ಸತೀಶ್ ದೇಶಪಾಂಡೆಯವರು ಸಿದ್ಧಪಡಿಸಿದ ಮುಸ್ಲಿಂ ಮತ್ತು ಕ್ರೈಸ್ತ ಸಮುದಾಯಗಳಲ್ಲಿ ದಲಿತರು, ಪ್ರಸಕ್ತ ಸಾಮಾಜಿಕ ಮತ್ತು ವೈಜ್ಞಾನಿಕ ಜ್ಞಾನದ ಸ್ಥಿತಿಗತಿಯ ವರದಿಯಲ್ಲಿ, ‘ದಲಿತ ಮುಸ್ಲಿಮರು ಮತ್ತು ದಲಿತ ಕ್ರೈಸ್ತರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡುವುದನ್ನು ನಿರಾಕರಿಸುವುದಕ್ಕೆ ಯಾವುದೇ ಸೂಕ್ತ ಸಾಕ್ಷ್ಯಾಧಾರವಿಲ್ಲ’ ಎಂದು ವಿವರಿಸಲಾಗಿದೆ. ಹೀಗಾಗಿ ಎಲ್ಲ ಅರ್ಹತೆ ಇರುವ ಈ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂದು ಸಮ್ಮೇಳನ ಒತ್ತಾಯಿಸಿದೆ.