ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಸಮ್ಮೇಳನದಲ್ಲಿ ಗಾಯಕರಾದ ವಿಜಯಪ್ರಕಾಶ್, ರಾಜೇಶ್ ಕೃಷ್ಣನ್, ಹೇಮಂತ್, ಅನುರಾಧ ಭಟ್ ಸಂಗೀತ ಸಂಜೆ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಕವಿಗೋಷ್ಠಿಯಲ್ಲಿ ಪ್ರೊ.ಕೆ.ಎಸ್ ನಿಸಾರ್ ಅಹಮ್ಮದ್, ಸಿದ್ಧಲಿಂಗಯ್ಯ, ಮೈಸೂರು ನಟರಾಜ್ ಭಾಗವಹಿಸಲಿದ್ದಾರೆ’ ಎಂದು ಹೇಳಿದರು.