ಬೆಂಗಳೂರು: ಪ್ರಧಾನಿ ಮೋದಿ ಸರ್ಕಾರದ ಸಾಧನೆಗಳನ್ನು ಸಾರ್ವಜನಿಕರು ಮತ್ತು ಗಣ್ಯರಿಗೆ ತಿಳಿಸುವ ಉದ್ದೇಶದಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಸದ್ಯವೇ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
‘ಸಮರ್ಥನೆಗಾಗಿ ಸಂಪರ್ಕ ಅಭಿಯಾನ’ವನ್ನು ರಾಷ್ಟ್ರವ್ಯಾಪಿ ಕೈಗೊಳ್ಳಲಾಗಿದ್ದು, ನಾಲ್ಕು ವರ್ಷದಲ್ಲಿ ಸರ್ಕಾರ ಕೈಗೊಂಡಿರುವ ಜನಪರ ಕಾರ್ಯಕ್ರಮಗಳನ್ನು ಜನರಿಗೆ ವಿವರಿಸಲಿದ್ದಾರೆ.