ಕುಂದಗೋಳ ತಾಲ್ಲೂಕಿನ ದೇವನೂರ, ಹಂಚಿನಾಳ ಗ್ರಾಮಗಳಲ್ಲಿ ಬುಧವಾರ ಬಿಜೆಪಿ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡ್ರ ಪರ ಪ್ರಚಾರ ನಡೆಸಿ ಮಾತನಾಡಿದರು. ಮಂಡ್ಯ, ಹಾಸನ ರೈತರ ಸಾಲ ಮನ್ನಾ ಮಾಡಿ ಋಣಮುಕ್ತ ಪತ್ರ ನೀಡಿರಬಹುದು. ಆದರೆ ಜಿಲ್ಲೆಗಳಲ್ಲಿ ಇದರ ಲಾಭ ರೈತರಿಗೆ ಸಿಕ್ಕಿಲ್ಲ ಎಂದರು. ನಿಮಗೇನಾದರೂ ಸಾಲ ಮನ್ನಾ ಆಗಿದೆಯೇ ಎಂದು ಅವರು ಜನರನ್ನು ಪ್ರಶ್ನಿಸಿದರು. ಇಲ್ಲ ಎಂಬ ಉತ್ತರವನ್ನು ಜನ ನೀಡಿದರು.