ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಟೆಂಪಲ್ ರನ್ ಮುಂದುವರಿದಿದ್ದು, ಮಂಗಳವಾರ ತಮಿಳುನಾಡಿನ ತಿರುಚಂಡೂರಿನ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಕುಟುಂಬ ಸಮೇತರಾಗಿ ಪೂಜೆ ಸಲ್ಲಿಸಿದರು.
ಲೋಕಸಭಾ ಚುನಾವಣೆಯಲ್ಲಿ ಪುತ್ರನ ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ. ಧರ್ಮಸ್ಥಳ, ಶೃಂಗೇರಿ, ಕೊಪ್ಪ ಮುಂತಾದ ಕಡೆಗಳಲ್ಲಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು. ತಮಿಳುನಾಡಿನ ತಿರುಚಂಡೂರಿಗೂ ಭೇಟಿ ನೀಡುವ ಹರಕೆ ಹೊತ್ತಿದ್ದರು.