ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣದ ಜತೆಗೆ ಕೌಶಲ ಇದ್ದರಷ್ಟೇ ಉದ್ಯೋಗ

ಯುವಿಸಿಇ ಪದವಿ ಪ್ರದಾನದಲ್ಲಿ ಕುಲಪತಿ ವೇಣುಗೋಪಾಲ್‌ ಕಿವಿಮಾತು
Last Updated 28 ಮೇ 2019, 20:10 IST
ಅಕ್ಷರ ಗಾತ್ರ

ಬೆಂಗಳೂರು:ಶಿಕ್ಷಣದ ಜತೆಗೆ ಕೌಶಲವನ್ನು ಅಳವಡಿಸಿಕೊಂಡರೆ ಮಾತ್ರ ಉತ್ತಮ ಉದ್ಯೋಗ ಅವಕಾಶ ದೊರಕಲು ಸಾಧ್ಯ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್‌.ವೇಣುಗೋಪಾಲ್‌ ಹೇಳಿದರು.

ಮಂಗಳವಾರ ಇಲ್ಲಿ ನಡೆದ ನಗರದ ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನ (ಯುವಿಸಿಇ) ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಶಿಕ್ಷಣ ಪಡೆಯದೇ ಜಗತ್ತಿನ ವಿವಿಧ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಿದ ಅನೇಕರನ್ನು ನೀವು ಕಾಣಬಹುದು, ಅವರು ಸ್ಪಷ್ಟವಾದ ಗುರಿಯಿಟ್ಟುಕೊಂಡು ಕಠಿಣವಾದ ಪರಿಶ್ರಮದಿಂದ ಆ ಸ್ಥಾನಕ್ಕೆ ಏರಿದ್ದಾರೆ’ ಎಂದರು.

ವಿಪ್ರೊ ಸಂಸ್ಥೆಯ ಪ್ರತಿಭಾ ರೂಪಾಂತರ ವಿಭಾಗದ ಪ್ರಧಾನ ವ್ಯವಸ್ಥಾಪಕಪಿ.ಬಿ.ಕೊಟ್ಟೂರು ಮಾತನಾಡಿ,ದೇಶದ ಆರ್ಥಿಕತೆ ವೇಗವಾಗಿ ಬೆಳವಣಿಗೆ ಸಾಧಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉದ್ಯೋಗಗಳ ಲಭ್ಯತೆ ಸುಲಭವಿದೆ ಎಂದರು.

ಯುವಿಸಿಇ ಕಾಲೇಜಿನ ಪ್ರಾಂಶುಪಾಲರಾಗಿದ್ದ ಪ್ರೊ.ವೇಣುಗೋಪಾಲ್ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT