ಬೆಂಗಳೂರು:ಶಿಕ್ಷಣದ ಜತೆಗೆ ಕೌಶಲವನ್ನು ಅಳವಡಿಸಿಕೊಂಡರೆ ಮಾತ್ರ ಉತ್ತಮ ಉದ್ಯೋಗ ಅವಕಾಶ ದೊರಕಲು ಸಾಧ್ಯ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಹೇಳಿದರು.
ಮಂಗಳವಾರ ಇಲ್ಲಿ ನಡೆದ ನಗರದ ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನ (ಯುವಿಸಿಇ) ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಶಿಕ್ಷಣ ಪಡೆಯದೇ ಜಗತ್ತಿನ ವಿವಿಧ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಿದ ಅನೇಕರನ್ನು ನೀವು ಕಾಣಬಹುದು, ಅವರು ಸ್ಪಷ್ಟವಾದ ಗುರಿಯಿಟ್ಟುಕೊಂಡು ಕಠಿಣವಾದ ಪರಿಶ್ರಮದಿಂದ ಆ ಸ್ಥಾನಕ್ಕೆ ಏರಿದ್ದಾರೆ’ ಎಂದರು.
ವಿಪ್ರೊ ಸಂಸ್ಥೆಯ ಪ್ರತಿಭಾ ರೂಪಾಂತರ ವಿಭಾಗದ ಪ್ರಧಾನ ವ್ಯವಸ್ಥಾಪಕಪಿ.ಬಿ.ಕೊಟ್ಟೂರು ಮಾತನಾಡಿ,ದೇಶದ ಆರ್ಥಿಕತೆ ವೇಗವಾಗಿ ಬೆಳವಣಿಗೆ ಸಾಧಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉದ್ಯೋಗಗಳ ಲಭ್ಯತೆ ಸುಲಭವಿದೆ ಎಂದರು.
ಯುವಿಸಿಇ ಕಾಲೇಜಿನ ಪ್ರಾಂಶುಪಾಲರಾಗಿದ್ದ ಪ್ರೊ.ವೇಣುಗೋಪಾಲ್ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು.