ಹೊಸಕೋಟೆ: ಹಾಲು ಉತ್ಪಾದಕರ ಹಿತ ಕಾಪಾಡುವಲ್ಲಿ ಬೆಂಗಳೂರು ಹಾಲು ಒಕ್ಕೂಟ ಬದ್ಧವಾಗಿದ್ದು ಅವರಿಗಾಗಿ ಹಲವು ಯೋಜನೆಗಳನ್ನು ರೂಪಿಸಿದೆ ಎಂದು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಿ.ಸಿ.ನಾಗರಾಜಯ್ಯ ಹೇಳಿದರು.
ತಾಲ್ಲೂಕಿನ ದೊಡ್ಡಹುಲ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ಬೆಳ್ಳಿ ಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಒಕ್ಕೂಟ ಅ.15ರಿಂದ ಉತ್ಪಾದ ಕರಿಗೆ ಪ್ರತಿ ಲೀಟರ್ ಹಾಲಿಗೆ ₹ 1 ಹೆಚ್ಚು ಕೊಡುತ್ತಿದೆ. ಹೊಸಕೋಟೆ ಬಳಿಯ ಶೀಥಲ ಸಂಗ್ರಹ ಕೇಂದ್ರವನ್ನು ಸುಮಾರು ₹ 30 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲಾಗುವುದು’ ಎಂದರು.
ಕ್ಕೂಟದ ನಿರ್ದೇಶಕ ಸಿ.ಮಂಜುನಾಥ್ ಮಾತನಾಡಿ, ‘ದೊಡ್ಡಹುಲ್ಲೂರು ಹಾಲು ಉತ್ಪಾದಕರ ಸಂಘ ಗಳಿಸಿದ ಲಾಭದಲ್ಲಿ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕ ಸ್ಥಾಪಿಸಿದೆ. ಗ್ರಾಮಕ್ಕೆ ಬೇಕಾದ ಸಾಮಾಜಿಕ ಉಪಯುಕ್ತ ಚಟುವಟಿಕೆಗಳಿಗೆ ಹಣ ವಿನಿಯೋಗಿಸುವುದರ ಮೂಲಕ ಮಾದರಿ ಸಂಘವಾಗಿದೆ’ ಎಂದರು.