ನಾಲ್ಕು ದಿನ ಕಳೆದರೂ ಗ್ರಾಹಕರಿಗೆ ಬೆಳ್ಳಿ ತಲುಪದಿರುವುದು ಕಂಪನಿ ಮಾಲೀಕರ ಗಮನಕ್ಕೆ ಬಂದಿತ್ತು. ಕೊರಿಯರ್ ಸರ್ವಿಸ್ನವರನ್ನು ಸಂಪರ್ಕಿಸಿದಾಗ, ಅವರು ಯಾವುದೇ ದೃಢೀಕರಣ ನೀಡಿರಲಿಲ್ಲ ಎಂದು ಭರತ್ ಮೆಹ್ತಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ತನಿಖೆ ನಡೆಯುತ್ತಿದ್ದು, ಡೆಲಿವರಿ ಬಾಯ್ ಪಾರ್ಸೆಲ್ ತೆಗೆದುಕೊಂಡಿರುವ ಸಾಧ್ಯತೆಗಳಿವೆ ಎಂದು ಪೊಲೀಸ್ ಮೂಲಗಳು ಶಂಕೆ ವ್ಯಕ್ತಪಡಿಸಿವೆ.