ಜಲತಜ್ಞ ನಾರಾಯಣ ಶೆಣೈ ಮಾತನಾಡಿ, ‘ಕೆರೆಗಳು ಕಣ್ಮರೆಯಾಗುತ್ತಿದ್ದು, ಆ ಜಾಗದಲ್ಲಿ ಮನೆ, ಅಪಾರ್ಟ್ಮೆಂಟ್ ಸಮುಚ್ಚಯಗಳು, ರಸ್ತೆ, ಬಸ್ ನಿಲ್ದಾಣ ಹಾಗೂ ಆಸ್ಪತ್ರೆಗಳು ನಿರ್ಮಾಣವಾಗುತ್ತಿವೆ. ಇದರಿಂದಾಗಿ ವಿಶ್ವದಲ್ಲಿಯೇ ಅತಿ ಹೆಚ್ಚು ಮಳೆಯಾಗುವ ರಾಷ್ಟ್ರಗಳಲ್ಲಿ ಭಾರತ ಎರಡನೇ ಸ್ಥಾನವಿದ್ದರೂ ಕೂಡಾ ನೀರಿನ ಸಮಸ್ಯೆಯಿದೆ. ಕಳೆದ ಎರಡು ದಶಕದಲ್ಲಿ ದೇಶದಲ್ಲಿ 2.97 ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದರು.