ಮೇ 7ರಂದು ಹೋಟೆಲ್ ಬಳಿ ಮಲ್ಲಿಕಾರ್ಜುನ್ ಅವರನ್ನು ಕಂಡ ತಂದೆ–ಮಗ, ತಮ್ಮ ಹಣ ಕೊಡುವಂತೆ ಕೇಳಿದ್ದಾರೆ. ಇದೇ ವಿಚಾರವಾಗಿ ಮಾತಿನ ಚಕಮಕಿ ಶುರುವಾಗಿ, ಕೆಲವೇ ಕ್ಷಣಗಳಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಈ ಹಂತದಲ್ಲಿ ಮಂಜುನಾಥ್ ಹಾಗೂ ಕಿರಣ್ ತಮ್ಮ ಬೆಂಬಲಿಗರೊಂದಿಗೆ ಸೇರಿಕೊಂಡು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.