ಸಹೋದರ ಹಾಗೂ ಬೆಂಬಲಿಗರೊಂದಿಗೆ ಮತ ಎಣಿಕೆ ಕೇಂದ್ರಕ್ಕೆ ಬಂದ ಕುಸುಮಾವತಿ ಶಿವಳ್ಳಿ ಅವರು ಚುನಾವಣಾಧಿಕಾರಿ ವಿ. ಪ್ರಸವನ್ನ ಅವರಿಂದ ಪ್ರಮಾಣ ಪತ್ರ ಸ್ವೀಕರಿಸಿದರು. ಆನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕ್ಷೇತ್ರದ ಜನರ ಆಶೀರ್ವಾದದಿಂದ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇನೆ. ಸಚಿವ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಎಲ್ಲಹಿರಿಯ ನಾಯಕರು ನನ್ನ ಪರವಾಗಿ ಪ್ರಚಾರ ಮಾಡಿದ್ದು ಅನುಕೂಲವಾಯಿತು. ಈ ಗೆಲುವನ್ನು ಪತಿ ದಿ. ಶಿವಳ್ಳಿ ಅವರಿಗೆ ಅರ್ಪಿಸುತ್ತೇನೆ’ ಎಂದು ಹೇಳಿದರು.