ದಿನೇಶ್ ಗುಂಡೂರಾವ್ ಅವರನ್ನು ಕೆಪಿಸಿಸಿ ನೇಮಕ ಮಾಡಿದಾಗ ಅವರ ಜತೆಗೆ ವೀರಶೈವ–ಲಿಂಗಾಯತ ಸಮುದಾಯದ ಈಶ್ವರ ಖಂಡ್ರೆ ಅವನ್ನುಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಲೋಕಸಭೆ ಚುನಾವಣೆ ಹೊತ್ತಿನಲ್ಲಿರುವಾಗ ದಲಿತ ಎಡಗೈ, ಒಕ್ಕಲಿಗ ಹಾಗೂ ಮುಸ್ಲಿಂ ಸಮುದಾಯಕ್ಕೆ ತಲಾ ಒಂದೊಂದು ಪ್ರಾತಿನಿಧ್ಯ ನೀಡಿ, ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡುವ ಚಿಂತನೆ ವರಿಷ್ಠರದ್ದಾಗಿದೆ ಎಂದು ಮೂಲಗಳು ಹೇಳಿವೆ.