ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯೆಗೆ ಕಿರುಕುಳ; ಕಾನ್‌ಸ್ಟೆಬಲ್ ಅಮಾನತು

Last Updated 24 ಅಕ್ಟೋಬರ್ 2018, 18:43 IST
ಅಕ್ಷರ ಗಾತ್ರ

ಬೆಂಗಳೂರು: ತನ್ನೊಂದಿಗೆ ಸಲುಗೆಯಿಂದ ಇರುವಂತೆ ದಂತವೈದ್ಯೆಗೆ ಕಿರುಕುಳ ನೀಡಿದ್ದ ಆರೋಪದಡಿ ಗಿರಿನಗರ ಠಾಣೆ ಕಾನ್‌ಸ್ಟೆಬಲ್ ಸುದರ್ಶನ್ ಅಸ್ಕಿ ಅವರನ್ನು ದಕ್ಷಿಣ ವಿಭಾಗದ ಡಿಸಿಪಿ ಬುಧವಾರ ಅಮಾನತು ಮಾಡಿದ್ದಾರೆ.

‘ಅಸ್ಕಿ ನಮ್ಮ ಕುಟುಂಬಕ್ಕೆ ತೊಂದರೆ ಕೊಡುತ್ತಿದ್ದಾರೆ. ಫೋನ್ ಮಾಡಿದಾಗ ಸಲುಗೆಯಿಂದ ಮಾತನಾಡದಿದ್ದರೆ ಗುಂಡಿಕ್ಕಿ ಕೊಲ್ಲುವುದಾಗಿ ‌ಬೆದರಿಸುತ್ತಿದ್ದಾರೆ’ ಎಂದು ಆರೋಪಿಸಿ 39 ವರ್ಷದ ವೈದ್ಯೆ ಜ್ಞಾನಭಾರತಿ ಠಾಣೆಗೆ ದೂರು ಕೊಟ್ಟಿದ್ದರು. ಎಫ್‌ಐಆರ್ ದಾಖಲಾದ ಬಳಿಕ ಅಸ್ಕಿ ರಜೆ ಮೇಲೆ ತೆರಳಿದ್ದರು.

‘ಮಹಿಳೆಯನ್ನು ಹಿಂಬಾಲಿಸಿದ (354ಡಿ) ಹಾಗೂ ಜೀವ ಬೆದರಿಕೆ ಹಾಕಿದ (506) ಆರೋಪಗಳಡಿ ಸುದರ್ಶನ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದೇವೆ. ಕಾನ್‌ಸ್ಟೆಬಲ್‌ನ ವಿಚಾರಣೆ ನಡೆಯುತ್ತಿದ್ದು, ತಪ್ಪು ಸಾಬೀತಾದರೆ ತಕ್ಷಣ ಬಂಧಿಸಲಾಗುವುದು’ ಎಂದು ಪಶ್ಚಿಮ ವಿಭಾಗದ ಡಿಸಿಪಿ ರವಿ.ಡಿ.ಚನ್ನಣ್ಣನವರ್ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT