ವೇಗವಾಗಿ ಚಾಲನೆ ಮಾಡಿಕೊಂಡು ಬಂದ ಶ್ರೀನಿವಾಸ್, ಮೇಲ್ಸೇತುವೆಯ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡರು. ಇದರಿಂದ ಅಡ್ಡಾದಿಡ್ಡಿಯಾಗಿ ಸಾಗಿದ ಲಾರಿ, ತಡೆಗೋಡೆಗೆ ಅಪ್ಪಳಿಸಿ ಸುಮಾರು 40 ಅಡಿ ಎತ್ತರದಿಂದ ಕೆಳಗೆ ಬಿದ್ದಿತು. ಅಲ್ಲೇ ಇದ್ದ ಆಟೊ ಚಾಲಕರು ಹಾಗೂ ಇತರೆ ವಾಹನಗಳ ಸವಾರರು ರಕ್ಷಣೆಗೆ ಧಾವಿಸಿದರು. ಆದರೆ, ದೇಹ ಅಪ್ಪಚ್ಚಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದರು.