ಕೊತ್ತನೂರು ರಸ್ತೆಯ ಚಿತ್ತೂರು ಬೇಕರಿ ಬಳಿ ಪುನಃ ಗೆಳೆಯನನ್ನು ಅಡ್ಡಗಟ್ಟಿದ ಗಣೇಶ್, ‘ನನಗೇ ಎಣ್ಣೆ ಕೊಡಿಸಲ್ಲ ಎನ್ನುತ್ತೀಯಾ ಎಂದು ಚಾಕು ಬೀಸಿದ್ದಾನೆ. ಕುಮಾರ್ ಬಲಗೈ ಅಡ್ಡ ಕೊಟ್ಟಾಗ ಹೆಬ್ಬೆರಳು ತುಂಡಾಗಿದೆ. ಇದೇ ವೇಳೆ ಅವರ ಸ್ನೇಹಿತ ಮಣಿ ರಕ್ಷಣೆಗೆ ಧಾವಿಸಿದ್ದು, ಆರೋಪಿ ಅವರ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ಕೋಣನಕುಂಟೆ ಪೊಲೀಸರು ಹೇಳಿದ್ದಾರೆ.