‘ನಗರದಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದ್ದು, ಶ್ವಾಸಕೋಶದ ತೊಂದರೆ, ಹೃದ್ರೋಗ ಸೇರಿದಂತೆ ಹಲವು ರೋಗಗಳಿಗೆ ಕಾರಣವಾಗಿದೆ. ನಗರದ ವಾಯು ಗುಣಮಟ್ಟದ ಬಗ್ಗೆ ಸಂಶೋಧನೆ ನಡೆಸಿ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ವರದಿಗಳನ್ನು ಮಂಡಿಸಿದ್ದೇವೆ. ವಾಯು ಗುಣಮಟ್ಟವನ್ನು ಕಾಪಾಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ವರದಿಗಳನ್ನು ಸಲ್ಲಿಸಿದ್ದೇವೆ. ಆದರೆ, ಅವುಗಳಿಗೆ ಕವಡೆ ಕಾಸಿನ ಕಿಮ್ಮತ್ತನ್ನೂ ನೀಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.