ಸಾಮಾಜಿಕ ಜಾಲತಾಣಗಳಲ್ಲಿ ಕಲಾವಿದರು ಸಚಿವರ ಹೇಳಿಕೆಯನ್ನು ಖಂಡಿಸಿದ್ದಾರೆ. ’ಮನೆಮುರುಕರು ಯಾರು? ಯಾವ ಸಾಹಿತಿ, ಕಲಾವಿದರು ಯಾರ ಮನೆಯನ್ನು ಮುರಿದಿದ್ದಾರೆ? ಇಲ್ಲಿವರೆಗೂ ಅಕಾಡೆಮಿಗಳು, ಪ್ರಾಧಿಕಾರಿಗಳಿಗೆ ಆಯ್ಕೆಯಾದವರಲ್ಲಿ ಯಾರು ಸಾಂಸ್ಕೃತಿಕ ಕ್ಷೇತ್ರ ಹಾಳು ಮಾಡಿದ್ದಾರೆ? ಕದಡುವ, ಒಡೆಯುವ ಮನಸ್ಥಿತಿಯನ್ನು ಯಾರು ಹೊಂದಿದ್ದಾರೆ’ ಎಂದು ಸಾಮಾಜಿಕ ಜಾಲದಲ್ಲಿ ಪ್ರಶ್ನೆ ಮಾಡಿದ್ದಾರೆ.