‘ನಮ್ಮ ಸಂವಿಧಾನವನ್ನು ಆಯಾ ಕಾಲಘಟ್ಟಕ್ಕೆ ತಿದ್ದುಪಡಿ ಮಾಡಲು ಅವಕಾಶಗಳಿವೆ. ಆದರೆ, ಪ್ರಜಾಪ್ರಭುತ್ವ, ಜಾತ್ಯತೀತತೆ, ಸಾಮಾಜಿಕ ನ್ಯಾಯ, ಅಧಿಕಾರ ವಿಕೇಂದ್ರೀಕರಣದಂತಹ ಮೂಲ ತತ್ವಗಳನ್ನು ತಿದ್ದಲು ಸಾಧ್ಯವಿಲ್ಲ. ಪ್ರಸ್ತುತ ಸಂವಿಧಾನವನ್ನು ಬದಲಾಯಿಸುವ ಮಾತುಗಳು ಕೇಳಿಬರುತ್ತಿವೆ. ಅದು ಸಾಧ್ಯವಾಗದ ಮಾತು’ ಎಂದರು.