ಹೊಸಕೋಟೆ : ತಾಲ್ಲೂಕಿನ ಖಾಜಿ ಹೊಸಹಳ್ಳಿಯಲ್ಲಿ ಜನವರಿ 13ರಂದು ರಾಜ್ಯ ಮಟ್ಟದ ದಲಿತ ಸಮಾವೇಶ ಆಯೋಜಿಸಲಾಗಿದೆ’ ಎಂದು ದಲಿತ ಸಂಘರ್ಷ ಸಮಿತಿಯ ಬೆಂಗಳೂರು ವಿಭಾಗದ ಸಂಚಾಲಕ ಮಂಜುನಾಥ ಅಣ್ಣಯ್ಯ ತಿಳಿಸಿದರು.
ಹೊಸಕೋಟೆಯಲ್ಲಿ ಬುಧವಾರ ನಡೆದ ತಾಲ್ಲೂಕು ಸಮಿತಿ ಪದಾಧಿಕಾರಿಗಳ ನೇಮಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಗ್ರಾಮೀಣ ಪ್ರದೇಶದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ಅದನ್ನು ತೊಡೆದು ಹಾಕಬೇಕಿದೆ. ಅದಕ್ಕಾಗಿ ಜನರನ್ನು ಜಾಗೃತಗೊಳಿಸುವ ಕೆಲಸವನ್ನು ಸಂಘಟನೆಗಳು ಮಾಡಬೇಕಿದೆ’ ಎಂದರು.
ತಾಲ್ಲೂಕು ಸಮಿತಿ ಸಂಚಾಲಕರನ್ನಾಗಿ ನಾರಾಯಣಸ್ವಾಮಿ, ಶಾಂತಕುಮಾರ್ ಅವರನ್ನು ನೇಮಕ ಮಾಡಲಾಯಿತು.