<p><strong>ಬೆಂಗಳೂರು:</strong> ಬೆಂಗಳೂರು ವಿಶ್ವವಿದ್ಯಾಲಯದ ಪ್ರದರ್ಶನ ಕಲಾ ವಿಭಾಗದಲ್ಲಿ ಗುರುವಾರ ‘ವಿಶ್ವ ನೃತ್ಯ ದಿನಾಚರಣೆ’ಯನ್ನು ಆಚರಿಸಲಾಯಿತು.</p>.<p>ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ‘ವಿಭಾಗದ ಪ್ರಾಧ್ಯಾಪಕರು ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ ಕೊಟ್ಟು ಪ್ರತಿಭಾವಂತರನ್ನು ಸೃಷ್ಟಿಸುತ್ತಿದ್ದಾರೆ. ಅದು ಹಾಗೆ ಮುಂದುವರಿಯಲಿ’ ಎಂದು ಹಾರೈಸಿದರು.</p>.<p>ಕುಲಸಚಿವ ಬಿ.ಕೆ.ರವಿ, ‘ನಮ್ಮಲ್ಲಿ ಅಪಾರವಾದ ಜನಪದ ಕಲಾ ಸಂಪತ್ತಿದೆ. ಅನೇಕರು ಶಾಸ್ತ್ರೀಯ ನೃತ್ಯಗಳ ಮೂಲ ಸೊಗಡನ್ನು ಬಿಟ್ಟು ಪಾಶ್ಚಾತ್ಯದ ಪ್ರಭಾವಕ್ಕೆ ಒಳಗಾಗಿದ್ದಾರೆ. ಆದ್ದರಿಂದ ಶಾಸ್ತ್ರೀಯ ನೃತ್ಯ ಮೂಲ ಬೇರನ್ನು ಕಳೆದುಕೊಳ್ಳುವ ಅಪಾಯದಲ್ಲಿದೆ’ ಎಂದು ಹೇಳಿದರು.</p>.<p>ಅಭಿನವ ನೃತ್ಯ ಸಂಸ್ಥೆಯ ನಿರ್ದೇಶಕಿ ಮತ್ತು ಕಥಕ್ ನೃತ್ಯ ಖ್ಯಾತಿಯ ನಿರುಪಮಾ ರಾಜೇಂದ್ರ, ನಿವೃತ್ತ ಪ್ರಾಧ್ಯಾಪಕರಾದ ಆರ್.ಟಿ.ರಮಾ, ಉಷಾ ದಾತಾರ್, ಸುಧೀಂದ್ರಶರ್ಮಾ, ವಿಜಯಾ ಮಾರ್ತಾಂಡ ಅವರನ್ನು ಸನ್ಮಾನಿಸಲಾಯಿತು.</p>.<p>ವಿದ್ಯಾರ್ಥಿಗಳು ಯಕ್ಷಗಾನ, ಕಥಕ್ ನೃತ್ಯವನ್ನು ಪ್ರದರ್ಶಿಸಿದರು. ವಿಭಾಗದ ಮುಖ್ಯಸ್ಥೆ ಪ್ರೊ.ಎಸ್.ಎನ್.ಸುಶೀಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ವಿಶ್ವವಿದ್ಯಾಲಯದ ಪ್ರದರ್ಶನ ಕಲಾ ವಿಭಾಗದಲ್ಲಿ ಗುರುವಾರ ‘ವಿಶ್ವ ನೃತ್ಯ ದಿನಾಚರಣೆ’ಯನ್ನು ಆಚರಿಸಲಾಯಿತು.</p>.<p>ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ‘ವಿಭಾಗದ ಪ್ರಾಧ್ಯಾಪಕರು ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ ಕೊಟ್ಟು ಪ್ರತಿಭಾವಂತರನ್ನು ಸೃಷ್ಟಿಸುತ್ತಿದ್ದಾರೆ. ಅದು ಹಾಗೆ ಮುಂದುವರಿಯಲಿ’ ಎಂದು ಹಾರೈಸಿದರು.</p>.<p>ಕುಲಸಚಿವ ಬಿ.ಕೆ.ರವಿ, ‘ನಮ್ಮಲ್ಲಿ ಅಪಾರವಾದ ಜನಪದ ಕಲಾ ಸಂಪತ್ತಿದೆ. ಅನೇಕರು ಶಾಸ್ತ್ರೀಯ ನೃತ್ಯಗಳ ಮೂಲ ಸೊಗಡನ್ನು ಬಿಟ್ಟು ಪಾಶ್ಚಾತ್ಯದ ಪ್ರಭಾವಕ್ಕೆ ಒಳಗಾಗಿದ್ದಾರೆ. ಆದ್ದರಿಂದ ಶಾಸ್ತ್ರೀಯ ನೃತ್ಯ ಮೂಲ ಬೇರನ್ನು ಕಳೆದುಕೊಳ್ಳುವ ಅಪಾಯದಲ್ಲಿದೆ’ ಎಂದು ಹೇಳಿದರು.</p>.<p>ಅಭಿನವ ನೃತ್ಯ ಸಂಸ್ಥೆಯ ನಿರ್ದೇಶಕಿ ಮತ್ತು ಕಥಕ್ ನೃತ್ಯ ಖ್ಯಾತಿಯ ನಿರುಪಮಾ ರಾಜೇಂದ್ರ, ನಿವೃತ್ತ ಪ್ರಾಧ್ಯಾಪಕರಾದ ಆರ್.ಟಿ.ರಮಾ, ಉಷಾ ದಾತಾರ್, ಸುಧೀಂದ್ರಶರ್ಮಾ, ವಿಜಯಾ ಮಾರ್ತಾಂಡ ಅವರನ್ನು ಸನ್ಮಾನಿಸಲಾಯಿತು.</p>.<p>ವಿದ್ಯಾರ್ಥಿಗಳು ಯಕ್ಷಗಾನ, ಕಥಕ್ ನೃತ್ಯವನ್ನು ಪ್ರದರ್ಶಿಸಿದರು. ವಿಭಾಗದ ಮುಖ್ಯಸ್ಥೆ ಪ್ರೊ.ಎಸ್.ಎನ್.ಸುಶೀಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>