<p><strong>ಬೆಂಗಳೂರು:</strong> ‘15 ವರ್ಷ ಹಳೆಯ ವಾಹನಗಳಿಗೆ ನಿಷೇಧ ಹೇರಲಾಗುವುದು’ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಹೇಳಿದರು.</p>.<p>ನಗರದಲ್ಲಿ ಸಾರಿಗೆ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಸಮಾರೋಪದಲ್ಲಿ ಅವರು ಮಾತನಾಡಿದರು.</p>.<p>‘ಸಂಚಾರ ದಟ್ಟಣೆ ನಿಭಾಯಿಸುವ ನಿಟ್ಟಿನಲ್ಲಿ ಕೆಲವುವಾಹನಗಳನ್ನು ನಿಷೇಧಿಸಬೇಕಾಗಿದೆ. ನಗರ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ಕಡಿಮೆ ಮಾಡಲು ವಾರ್ಡ್ ಮಟ್ಟದಲ್ಲಿ ಜಾಗೃತಿ, ಅರಿವು ಮೂಡಿಸಲಾಗುವುದು’ ಎಂದರು.</p>.<p>‘ರಾಜ್ಯದಲ್ಲಿ ಜನಸಂಖ್ಯೆಯ ಅರ್ಧದಷ್ಟು ವಾಹನಗಳು ನೋಂದಣಿಯಾಗಿವೆ. ರಾಜಧಾನಿಯಲ್ಲಿ 1 ಕೋಟಿ ಜನಸಂಖ್ಯೆ ಇದೆ. ಸುಮಾರು ಅಷ್ಟೇ ಸಂಖ್ಯೆಯ ವಾಹನಗಳಿವೆ. ಇದರ ನಡುವೆ ಹೊರ ರಾಜ್ಯಗಳಿಂದಲೂ ಲಕ್ಷಾಂತರ ವಾಹನಗಳು ಬರುತ್ತಿವೆ’ ಎಂದರು.</p>.<p>ಶಾಸಕ ಉದಯ್ ಬಿ.ಗರುಡಾಚಾರ್ ಮಾತನಾಡಿ, ‘ನಗರ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ಸಮಸ್ಯೆಗೆ ಕಡಿವಾಣ ಹಾಕಲು ಹದಿನೈದು ವರ್ಷ ಹಳೆಯ ವಾಹನ ನಿಷೇಧಿಸಬೇಕು’ ಎಂದರು.</p>.<p>ಸಾರಿಗೆ ಇಲಾಖೆ ಆಯುಕ್ತ ವಿ.ಪಿ.ಇಕ್ಕೇರಿ ಮಾತನಾಡಿ, ‘ಸುರಕ್ಷತಾ ನಿಯಮ ಪಾಲಿಸದ ಕಾರಣ ದೇಶದಲ್ಲಿ ಪ್ರತಿ ವರ್ಷ ಒಂದೂವರೆ ಲಕ್ಷಕ್ಕೂ ಅಧಿಕ ಜನ ಸಾಯುತ್ತಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘15 ವರ್ಷ ಹಳೆಯ ವಾಹನಗಳಿಗೆ ನಿಷೇಧ ಹೇರಲಾಗುವುದು’ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಹೇಳಿದರು.</p>.<p>ನಗರದಲ್ಲಿ ಸಾರಿಗೆ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಸಮಾರೋಪದಲ್ಲಿ ಅವರು ಮಾತನಾಡಿದರು.</p>.<p>‘ಸಂಚಾರ ದಟ್ಟಣೆ ನಿಭಾಯಿಸುವ ನಿಟ್ಟಿನಲ್ಲಿ ಕೆಲವುವಾಹನಗಳನ್ನು ನಿಷೇಧಿಸಬೇಕಾಗಿದೆ. ನಗರ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ಕಡಿಮೆ ಮಾಡಲು ವಾರ್ಡ್ ಮಟ್ಟದಲ್ಲಿ ಜಾಗೃತಿ, ಅರಿವು ಮೂಡಿಸಲಾಗುವುದು’ ಎಂದರು.</p>.<p>‘ರಾಜ್ಯದಲ್ಲಿ ಜನಸಂಖ್ಯೆಯ ಅರ್ಧದಷ್ಟು ವಾಹನಗಳು ನೋಂದಣಿಯಾಗಿವೆ. ರಾಜಧಾನಿಯಲ್ಲಿ 1 ಕೋಟಿ ಜನಸಂಖ್ಯೆ ಇದೆ. ಸುಮಾರು ಅಷ್ಟೇ ಸಂಖ್ಯೆಯ ವಾಹನಗಳಿವೆ. ಇದರ ನಡುವೆ ಹೊರ ರಾಜ್ಯಗಳಿಂದಲೂ ಲಕ್ಷಾಂತರ ವಾಹನಗಳು ಬರುತ್ತಿವೆ’ ಎಂದರು.</p>.<p>ಶಾಸಕ ಉದಯ್ ಬಿ.ಗರುಡಾಚಾರ್ ಮಾತನಾಡಿ, ‘ನಗರ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ಸಮಸ್ಯೆಗೆ ಕಡಿವಾಣ ಹಾಕಲು ಹದಿನೈದು ವರ್ಷ ಹಳೆಯ ವಾಹನ ನಿಷೇಧಿಸಬೇಕು’ ಎಂದರು.</p>.<p>ಸಾರಿಗೆ ಇಲಾಖೆ ಆಯುಕ್ತ ವಿ.ಪಿ.ಇಕ್ಕೇರಿ ಮಾತನಾಡಿ, ‘ಸುರಕ್ಷತಾ ನಿಯಮ ಪಾಲಿಸದ ಕಾರಣ ದೇಶದಲ್ಲಿ ಪ್ರತಿ ವರ್ಷ ಒಂದೂವರೆ ಲಕ್ಷಕ್ಕೂ ಅಧಿಕ ಜನ ಸಾಯುತ್ತಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>