‘ಲಕ್ಷ್ಮಿಸಾಗರ್ ಅವರು ಈ ಹಿಂದೆ ತಹಶೀಲ್ದಾರ್ ಆಗಿದ್ದರು. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ವಿರುದ್ಧವಾಗಿ ಅವರನ್ನು ನಗರಾಭಿವೃದ್ಧಿ ಇಲಾಖೆಗೆ ನೇಮಕ ಮಾಡಲಾಗಿದೆ. ಅವರ ವಿರುದ್ಧ ಸಚಿವಾಲಯದ ನೌಕರರು ಪ್ರತಿಭಟನೆ ಮಾಡಿದ್ದಾರೆ. ಲಕ್ಷ್ಮಿಸಾಗರ್ ವಿರುದ್ಧ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸಾಕಷ್ಟು ದೂರುಗಳನ್ನು ನೀಡಿದ್ದಾರೆ. ಹೀಗಾಗಿ, ಅವರನ್ನು ಮಾತೃ ಇಲಾಖೆಗೆ ಕಳುಹಿಸಬೇಕು’ ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.