ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಾಥಮಿಕಕೃಷಿ ಪತ್ತಿನ ಸಹಕಾರ ಸಂಘಗಳು ಸುಮಾರು ವರ್ಷಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ರೈತರ ಎಲ್ಲಾ ಕೆಲಸಗಳನ್ನು ಮಾಡುತ್ತಿವೆ. ಆದರೂ ಅವರಿಗೇ ಸೇವಾ ಭದ್ರತೆ ಇಲ್ಲ. ಈ ಬಗ್ಗೆ ಅನೇಕ ಬಾರಿ ಪ್ರತಿಭಟನೆ ಮಾಡಲಾಗಿದೆ. ಸಹಕಾರ ಸಚಿವರಿಗೂ ಮನವರಿಕೆ ಮಾಡಲಾಗಿದೆ. ಆದರೂ, ಗಮನಹರಿಸಿಲ್ಲ’ ಎಂದರು.