ಬೆಳಗಾವಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಲು ಸಹಕರಿಸಿದ ಆರೋಪದ ಮೇಲೆ, ಜಿಲ್ಲೆಯ ರಾಯಬಾಗ ತಾಲ್ಲೂಕಿನ ಹಾರೂಗೇರಿಯ ಎಚ್ವಿಎಚ್ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪ ಪ್ರಾಚಾರ್ಯರಾದ ಎಂ.ಆರ್. ಮಗದುಮ್ಮ, ಶಿಕ್ಷಕರಾದ ಡಿ.ಪಿ. ಕಾಪ್ಸಿ, ಎ.ಬಿ. ಪಾಟೀಲ ಹಾಗೂ ಅಲಕನೂರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಪಿ.ಬಿ. ಪಾಲಯ್ಯ ಅವರನ್ನು ಸೋಮವಾರ ತಡರಾತ್ರಿ ಬಂಧಿಸಲಾಗಿದೆ.