ಹಣೆಯಲ್ಲಿ ಭಸ್ಮ, ಕೊರಳಲ್ಲಿ ಲಿಂಗ-ರುದ್ರಾಕ್ಷಿ ಬಾಯಲ್ಲಿ ಶಿವಮಂತ್ರ ಜಪಿಸುವುದು ವೀರಶೈವ ಧರ್ಮದ ಪ್ರಮುಖ ಲಕ್ಷಣಗಳು. ಶ್ರೀ ಜಗದ್ಗುರು ರೇಣುಕಾಚಾರ್ಯರು ಅತ್ಯುನ್ನತವಾದ ಧರ್ಮ ಸಿದ್ಧಾಂತವನ್ನು ಬೋಧಿಸಿ ಉದ್ಧರಿಸಿದ್ದಾರೆ. ಜಾತಿಗಿಂತ ನೀತಿ, ತತ್ವಕ್ಕಿಂತ ಆಚರಣೆ, ಮಾತಿಗಿಂತ ಕೃತಿ, ಬೋಧನೆಗಿಂತ ಸಾಧನೆ, ದಾನಕ್ಕಿಂತ ದಾಸೋಹ, ಚರಿತ್ರೆಗಿಂತ ಚಾರಿತ್ರ್ಯ ದೊಡ್ಡದೆಂದು ಸಾರಿದ್ದಾರೆ ಎಂದು ತಿಳಿಸಿದರು.