ಬೆಂಗಳೂರು: ‘ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಉಗ್ರವಾದಿ ಚಟುವಟಿಕೆ ಹೆಚ್ಚಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ಮಾಧ್ಯಮ ಪ್ರತಿನಿಧಿಗಳ ಜೊತೆ ಸೋಮವಾರ ಮಾತನಾಡಿದ ಅವರು, ‘ಉಗ್ರವಾದವನ್ನು ಹತ್ತಿಕ್ಕುವ ಬದಲು ಪ್ರಧಾನಿ ನರೇಂದ್ರ ಮೋದಿ ಅವರು, ಲೋಕಸಭೆ ಚುನಾವಣೆಯತ್ತ ಹೆಚ್ಚು ಗಮನಹರಿಸಿದ್ದಾರೆ’ ಎಂದು ದೂರಿದರು.
ಪ್ರತೀಕಾರ ತೀರಿಸಿಕೊಳ್ಳಬೇಕು: ಖಾದರ್
‘ಉಗ್ರರ ದಾಳಿ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಬೇಕಿದೆ. ಕೇಂದ್ರ ಸರ್ಕಾರ ಈ ವಿಷಯದಲ್ಲಿ ಗಂಭೀರ ನಿಲುವು ತೆಗೆದುಕೊಳ್ಳಬೇಕು’ ಎಂದು ಸಚಿವ ಯು.ಟಿ. ಖಾದರ್ ಹೇಳಿದರು.
‘ಪಾಕಿಸ್ತಾನಕ್ಕೆ ತೆರಳಿ ಚಹಾ ಕುಡಿದು ಬರುವುದು ಅಥವಾ ಭಾರತಕ್ಕೆ ಬಂದವರಿಗೆ ಸೀರೆ ಕೊಟ್ಟು ಕಳುಹಿಸುವ ಬದಲು ಪ್ರತೀಕಾರ ತೀರಿಸಿಕೊಳ್ಳಬೇಕು’ ಎಂದರು.