<p><strong>ಹುಬ್ಬಳ್ಳಿ:</strong> ಪ್ರಸಕ್ತ ಸಾಲಿನಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ ಎಂದು ಪೊಲೀಸ್ ಕಮಿಷನರ್ ಎಂ.ಎನ್. ನಾಗರಾಜ ಹೇಳಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2016ರಲ್ಲಿ 2,047, 2017ರಲ್ಲಿ 1,814 ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿದ್ದವು. ಆದರೆ ಈ ವರ್ಷ ಪ್ರಸಕ್ತ ಸಾಲಿನ ನವೆಂಬರ್ ವರೆಗೆ 1,300 ಪ್ರಕರಣಗಳು ದಾಖಲಾಗಿವೆ. ಈ ವರ್ಷದಲ್ಲಿ ಕಳವಾದ ಸ್ವತ್ತುಗಳ ಒಟ್ಟು ಮೊತ್ತ ₹3 ಕೋಟಿಯಾಗಿದ್ದು ಅದರಲ್ಲಿ ₹1 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 2017ರಲ್ಲಿ ಕಳವಾಗಿದ್ದ ₹5.83 ಕೋಟಿ ಸ್ವತ್ತಿನಲ್ಲಿ ₹2 ಕೋಟಿ ಮೊತ್ತದ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಮಾಹಿತಿ ನೀಡಿದರು.</p>.<p>ಹೊಸ ಗಸ್ತು ವ್ಯವಸ್ಥೆ ಜಾರಿಗೆ ಬಂದ ಮೇಲೆ ಅಪರಾಧಗಳ ಪ್ರಮಾಣ ಕಡಿಮೆಯಾಗಿದೆ. ಹಲವು ಪ್ರಕರಣಗಳನ್ನು ಭೇದಿಸಲು ಮಾಹಿತಿಯೂ ಸಿಕ್ಕಿದೆ. ಈ ಬಾರಿ ಅಪರಾಧ ತಡೆ ಮಾಸಾಚರಣೆಯನ್ನು ವಿನೂತನವಾಗಿ ಆಚರಿಸಲಾಗುವುದು. ಇನ್ಸ್ಪೆಕ್ಟರ್ ಸೇರಿದಂತೆ ಎಲ್ಲ ಅಧಿಕಾರಿಗಳು ಕನಿಷ್ಠ ಮೂರು ಕಾಲೇಜುಗಳಿಗೆ ಭೇಟಿ ನೀಡಿ ಅಪರಾಧ ತಡೆಯ ಬಗ್ಗೆ ಮಾಹಿತಿ ನೀಡಲಿದ್ದಾರೆ. ಮಾದಕ ವಸ್ತು, ಸೈಬರ್ ಅಪರಾಧ, ಆನ್ಲೈನ್ ವಂಚನೆ ಬಗ್ಗೆ ತಿಳಿವಳಿಕೆ ನೀಡುವರು ಎಂದರು.</p>.<p>ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಬಗ್ಗೆ ಜನರಿಗೆ ಮಾಹಿತಿ ನೀಡಲು ಈ ಬಾರಿಯೂ ಮನೆ ಮನೆಗೆ ಕರಪತ್ರ ಹಂಚಲಾಗುವುದು. ಇದಕ್ಕಾಗಿ ಒಟ್ಟು 5 ಲಕ್ಷ ಕರಪತ್ರ ಮುದ್ರಿಸಲಾಗಿದೆ. ನಗರದ ಪ್ರಮುಖ ಜಂಕ್ಷನ್ಗಳಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ ಎಂದರು. ಡಿಸಿಪಿ ರವೀಂದ್ರ ಗಡಾದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಪ್ರಸಕ್ತ ಸಾಲಿನಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ ಎಂದು ಪೊಲೀಸ್ ಕಮಿಷನರ್ ಎಂ.ಎನ್. ನಾಗರಾಜ ಹೇಳಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2016ರಲ್ಲಿ 2,047, 2017ರಲ್ಲಿ 1,814 ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿದ್ದವು. ಆದರೆ ಈ ವರ್ಷ ಪ್ರಸಕ್ತ ಸಾಲಿನ ನವೆಂಬರ್ ವರೆಗೆ 1,300 ಪ್ರಕರಣಗಳು ದಾಖಲಾಗಿವೆ. ಈ ವರ್ಷದಲ್ಲಿ ಕಳವಾದ ಸ್ವತ್ತುಗಳ ಒಟ್ಟು ಮೊತ್ತ ₹3 ಕೋಟಿಯಾಗಿದ್ದು ಅದರಲ್ಲಿ ₹1 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 2017ರಲ್ಲಿ ಕಳವಾಗಿದ್ದ ₹5.83 ಕೋಟಿ ಸ್ವತ್ತಿನಲ್ಲಿ ₹2 ಕೋಟಿ ಮೊತ್ತದ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಮಾಹಿತಿ ನೀಡಿದರು.</p>.<p>ಹೊಸ ಗಸ್ತು ವ್ಯವಸ್ಥೆ ಜಾರಿಗೆ ಬಂದ ಮೇಲೆ ಅಪರಾಧಗಳ ಪ್ರಮಾಣ ಕಡಿಮೆಯಾಗಿದೆ. ಹಲವು ಪ್ರಕರಣಗಳನ್ನು ಭೇದಿಸಲು ಮಾಹಿತಿಯೂ ಸಿಕ್ಕಿದೆ. ಈ ಬಾರಿ ಅಪರಾಧ ತಡೆ ಮಾಸಾಚರಣೆಯನ್ನು ವಿನೂತನವಾಗಿ ಆಚರಿಸಲಾಗುವುದು. ಇನ್ಸ್ಪೆಕ್ಟರ್ ಸೇರಿದಂತೆ ಎಲ್ಲ ಅಧಿಕಾರಿಗಳು ಕನಿಷ್ಠ ಮೂರು ಕಾಲೇಜುಗಳಿಗೆ ಭೇಟಿ ನೀಡಿ ಅಪರಾಧ ತಡೆಯ ಬಗ್ಗೆ ಮಾಹಿತಿ ನೀಡಲಿದ್ದಾರೆ. ಮಾದಕ ವಸ್ತು, ಸೈಬರ್ ಅಪರಾಧ, ಆನ್ಲೈನ್ ವಂಚನೆ ಬಗ್ಗೆ ತಿಳಿವಳಿಕೆ ನೀಡುವರು ಎಂದರು.</p>.<p>ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಬಗ್ಗೆ ಜನರಿಗೆ ಮಾಹಿತಿ ನೀಡಲು ಈ ಬಾರಿಯೂ ಮನೆ ಮನೆಗೆ ಕರಪತ್ರ ಹಂಚಲಾಗುವುದು. ಇದಕ್ಕಾಗಿ ಒಟ್ಟು 5 ಲಕ್ಷ ಕರಪತ್ರ ಮುದ್ರಿಸಲಾಗಿದೆ. ನಗರದ ಪ್ರಮುಖ ಜಂಕ್ಷನ್ಗಳಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ ಎಂದರು. ಡಿಸಿಪಿ ರವೀಂದ್ರ ಗಡಾದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>