<p><strong>ಬೆಂಗಳೂರು:</strong> ಸರಿಯಾಗಿ ಚಿಕಿತ್ಸೆ ನೀಡದ ಕಾರಣ ಜೂಲಿ ಎಂಬ ಬೀದಿ ನಾಯಿ ಮೃತಪಟ್ಟಿದೆ ಎಂದು ಆರೋಪಿಸಿ ಪಶುವೈದ್ಯರು ಮತ್ತು ಸುಷ್ಮಾ ಎಂಟರ್ಪ್ರೈಸಸ್ ಎನ್ಜಿಒ ಸಂಸ್ಥೆಯ ವಿರುದ್ಧ ಪ್ರಾಣಿಗಳ ಹಕ್ಕುಗಳ ಹೋರಾಟಗಾರ್ತಿ ನೆವಿನಾ ಕಾಮತ್ ಅವರು ಬೈಯಪ್ಪನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<p>ಸುಷ್ಮಾ ಎಂಟರ್ಪ್ರೈಸಸ್ನ ಸಂಸ್ಥಾಪಕರಾದ ಅರುಣಾ ರೆಡ್ಡಿ ಎಂಬುವರು ಬಿಬಿಎಂಪಿಯಿಂದ ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡುವ ಗುತ್ತಿಗೆ ಪಡೆದಿದ್ದಾರೆ. ಕಗ್ಗದಾಸಪುರದ ಅಬ್ಬಯ್ಯರೆಡ್ಡಿ ಲೇಔಟ್ನ ಈ ನಾಯಿಯನ್ನು ಸಂತಾನಹರಣ ಚಿಕಿತ್ಸೆಗೆಂದು ತೆಗೆದುಕೊಂಡು ಹೋಗಿ, ಚಿಕಿತ್ಸೆ ಬಳಿಕ ಮತ್ತೆ ಅದೇ ಸ್ಥಳದಲ್ಲಿ ಬಿಟ್ಟು ಹೋಗಿದ್ದರು.</p>.<p>‘ಪಶುವೈದ್ಯರ ಎಡವಟ್ಟಿನಿಂದ ಚಿಕಿತ್ಸೆ ನೀಡಿದ ಕೆಲವು ದಿನಗಳಲ್ಲೇ ನಾಯಿಯನ್ನು ಕಳೆದುಕೊಳ್ಳಬೇಕಾಯಿತು. ತೀರಾ ಅಸ್ವಸ್ಥಗೊಂಡಿದ್ದ ನಾಯಿಗೆ ನಿಂತುಕೊಳ್ಳಲು ಆಗುತ್ತಿರಲಿಲ್ಲ. ಆಹಾರ ಸೇವಿಸಲು ಕಷ್ಟಪಡುತ್ತಿತ್ತು. ಪಶು ವೈದ್ಯರು ಮತ್ತು ಅರುಣಾ ರೆಡ್ಡಿ ಅವರೇ ಇದಕ್ಕೆಲ್ಲ ಕಾರಣ’ ಎಂದು ನೆವಿನಾ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸರಿಯಾಗಿ ಚಿಕಿತ್ಸೆ ನೀಡದ ಕಾರಣ ಜೂಲಿ ಎಂಬ ಬೀದಿ ನಾಯಿ ಮೃತಪಟ್ಟಿದೆ ಎಂದು ಆರೋಪಿಸಿ ಪಶುವೈದ್ಯರು ಮತ್ತು ಸುಷ್ಮಾ ಎಂಟರ್ಪ್ರೈಸಸ್ ಎನ್ಜಿಒ ಸಂಸ್ಥೆಯ ವಿರುದ್ಧ ಪ್ರಾಣಿಗಳ ಹಕ್ಕುಗಳ ಹೋರಾಟಗಾರ್ತಿ ನೆವಿನಾ ಕಾಮತ್ ಅವರು ಬೈಯಪ್ಪನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<p>ಸುಷ್ಮಾ ಎಂಟರ್ಪ್ರೈಸಸ್ನ ಸಂಸ್ಥಾಪಕರಾದ ಅರುಣಾ ರೆಡ್ಡಿ ಎಂಬುವರು ಬಿಬಿಎಂಪಿಯಿಂದ ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡುವ ಗುತ್ತಿಗೆ ಪಡೆದಿದ್ದಾರೆ. ಕಗ್ಗದಾಸಪುರದ ಅಬ್ಬಯ್ಯರೆಡ್ಡಿ ಲೇಔಟ್ನ ಈ ನಾಯಿಯನ್ನು ಸಂತಾನಹರಣ ಚಿಕಿತ್ಸೆಗೆಂದು ತೆಗೆದುಕೊಂಡು ಹೋಗಿ, ಚಿಕಿತ್ಸೆ ಬಳಿಕ ಮತ್ತೆ ಅದೇ ಸ್ಥಳದಲ್ಲಿ ಬಿಟ್ಟು ಹೋಗಿದ್ದರು.</p>.<p>‘ಪಶುವೈದ್ಯರ ಎಡವಟ್ಟಿನಿಂದ ಚಿಕಿತ್ಸೆ ನೀಡಿದ ಕೆಲವು ದಿನಗಳಲ್ಲೇ ನಾಯಿಯನ್ನು ಕಳೆದುಕೊಳ್ಳಬೇಕಾಯಿತು. ತೀರಾ ಅಸ್ವಸ್ಥಗೊಂಡಿದ್ದ ನಾಯಿಗೆ ನಿಂತುಕೊಳ್ಳಲು ಆಗುತ್ತಿರಲಿಲ್ಲ. ಆಹಾರ ಸೇವಿಸಲು ಕಷ್ಟಪಡುತ್ತಿತ್ತು. ಪಶು ವೈದ್ಯರು ಮತ್ತು ಅರುಣಾ ರೆಡ್ಡಿ ಅವರೇ ಇದಕ್ಕೆಲ್ಲ ಕಾರಣ’ ಎಂದು ನೆವಿನಾ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>