ನಗರದ ಸಾಫ್ಟ್ವೇರ್ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿರುವ ಪೀನು, ‘ಯುಧಿಷ್ಠಿರ ಹಾಗೂ ಆತನ ತಾಯಿ ಬಿಮ್ಲಾ ಪೂನಿಯಾ ಮದುವೆ ಸಮಯದಲ್ಲಿ ಹಣ, ಚಿನ್ನಾಭರಣವನ್ನು ವರದಕ್ಷಿಣೆಯಾಗಿ ಪಡೆದಿದ್ದರು. ಆರಂಭದಲ್ಲಿ ಚೆನ್ನಾಗಿಯೇ ನೋಡಿಕೊಳ್ಳುತ್ತಿದ್ದ ಅವರು, ಹೆಣ್ಣು ಮಗು ಜನಿಸಿದ ಬಳಿಕ ಕಿರುಕುಳ ನೀಡಲು ಶುರು ಮಾಡಿದರು. ಇನ್ನಷ್ಟು ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದರು. ಹೀಗಾಗಿ, ಅವರಿಂದ ಪ್ರತ್ಯೇಕವಾಗಿ ಬದುಕಲು ನಿರ್ಧರಿಸಿದ್ದೇನೆ. ಅತ್ತೆ ಹಾಗೂ ಗಂಡನ ವಿರುದ್ಧ ಕ್ರಮ ತೆಗೆದುಕೊಳ್ಳಿ’ ಎಂದು ದೂರು ಕೊಟ್ಟಿದ್ದರು.