ಅಭಿವೃದ್ಧಿ ಕಾರ್ಯಗಳ ಬಳಿಕ ವರ್ಷದ ಹಿಂದೆ ಕೆರೆ ಸುಂದರವಾಗಿ ಕಂಗೊಳಿಸುತ್ತಿತ್ತು. ಒಂದು ತಿಂಗಳಿನಿಂದ ದೊಡ್ಡಬೊಮ್ಮಸಂದ್ರ, ತಿಂಡ್ಲು, ವಿದ್ಯಾರಣ್ಯಪುರ, ಗಂಗಮ್ಮಗುಡಿ ಬಡಾವಣೆಗಳಿಂದ ಕೊಳಚೆನೀರು ಹರಿದು ಬಂದು ಕೆರೆಗೆ ಸೇರುತ್ತಿದೆ. ಇದರಿಂದ ಕೆರೆಯ ಪರಿಸರದಲ್ಲಿ ದುರ್ಗಂಧ ಹರಡಿದೆ. ಇದರಿಂದ ಇಲ್ಲಿಗೆ ಬರುತ್ತಿದ್ದ ವಾಯುವಿಹಾರಿಗಳ ಸಂಖ್ಯೆಯೂ ಕ್ಷೀಣಿಸುತ್ತಿದೆ.