ವಿಚಾರಣೆ ವೇಳೆ ಖುದ್ದು ಹಾಜರಿದ್ದ ಪಶುಸಂಗೋಪನಾ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಪಿ. ಮಣಿವಣ್ಣನ್, ‘ಆಗಸ್ಟ್ ತಿಂಗಳಲ್ಲಿ 56 ತಾಲ್ಲೂಕುಗಳ ಬಗ್ಗೆ ಅಧಿಸೂಚನೆ ಹೊರಡಿಸಲಾಗು ವುದು’ ಎಂದರು. ಇದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ಓಕಾ ಅವರು, ‘ಏಕೆ ನಿಮಗೆ ಆಗಸ್ಟ್ ತಿಂಗಳೇ ಪ್ರಶಸ್ತವೇ’ ಎಂದು ಪ್ರಶ್ನಿಸಿದರಲ್ಲದೇ, ‘ಬರಪೀಡಿತ ಪ್ರದೇಶ ಗಳಲ್ಲಿ ಪ್ರತಿ ತಾಲ್ಲೂಕಿಗೆ ಕನಿಷ್ಠ ಒಂದಾದರೂ ಜಾನುವಾರು ಶಿಬಿರ ಸ್ಥಾಪಿಸಬೇಕು’ ಎಂದು ತಾಕೀತು ಮಾಡಿ ವಿಚಾರಣೆಯನ್ನು ಆಗಸ್ಟ್ 16ಕ್ಕೆ ಮುಂದೂಡಿದರು.