ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ಇ–ಕಾಮರ್ಸ್‌ ನೀತಿಗೆ ಆಕ್ಷೇಪ

Last Updated 5 ಏಪ್ರಿಲ್ 2019, 19:54 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರದ ಕರಡು ಇ–‌ಕಾಮರ್ಸ್ ನೀತಿಗೆ ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟವು ಆಕ್ಷೇಪ ವ್ಯಕ್ತಪಡಿಸಿ ಉದ್ಯಮ ಮತ್ತು ಆಂತರಿಕ ವ್ಯಾಪಾರ ಪ್ರಚಾರ ಇಲಾಖೆಗೆ ಪತ್ರ ಬರೆದಿದೆ. ಕೆಲವೊಂದು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದೆ.

‘ಈಗಾಗಲೇ ಕಷ್ಟದಲ್ಲಿರುವ ವ್ಯಾಪಾರಿಗಳಿಗೆ, ಇ–ಕಾಮರ್ಸ್‌ ಕಂಪನಿಗಳಿಂದ ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ. ಕಂಪನಿಗಳು ನೀಡುವಷ್ಟು ರಿಯಾಯಿತಿ ನಮಗೆ ಕೊಡಲು ಸಾಧ್ಯವಿಲ್ಲ. ವಿದೇಶಿ ಕಂಪನಿಗಳ ಹಾವಳಿಯಿಂದಾಗಿ ಸ್ವದೇಶಿ ವಸ್ತುಗಳಿಗೆ ಬೇಡಿಕೆ ಕುಸಿದಿದೆ’ ಎಂದು ಪತ್ರದಲ್ಲಿ ತಿಳಿಸಿದೆ.‘ಬೀದಿ ವ್ಯಾಪಾರಿಗಳ ಮೇಲೆ ಈಗಾಗಲೇ ಇ–ಕಾಮರ್ಸ್‌, ಜಿಎಸ್‌ಟಿಯಿಂದ ಆಗಿರುವ ಪರಿಣಾಮವನ್ನು ತಿಳಿಸಿಕೊಡಲು ವ್ಯಾಪಾರಿಗಳ ಜತೆ ಮಾತುಕತೆ ನಡೆಸಲು ಅವಕಾಶ ನೀಡಬೇಕು. ಹಾಗೆಯೇ ವ್ಯಾಪಾರ ಕ್ಷೇತ್ರ ಕುಸಿಯುತ್ತಿರುವ ಬಗ್ಗೆ ಸಮೀಕ್ಷೆ ನಡೆಸಬೇಕು. ಅದಕ್ಕೊಂದು ಸಮಿತಿ–ಆಯೋಗ ರಚಿಸಬೇಕು’ ಎಂದು ಒತ್ತಾಯಿಸಿದೆ.

‘ಕರಡು ಇ–ಕಾಮರ್ಸ್‌ ನೀತಿಯನ್ನು ದೇಶದ ಎಲ್ಲಾ ಭಾಷೆಗಳಲ್ಲಿ ಅನುವಾದಗೊಳಿಸಿ ಸಾರ್ವಜನಿಕರ ಚರ್ಚೆಗಳಿಗೆ ಅವಕಾಶ ಕಲ್ಪಿಸಬೇಕು. ಅದರ ಬಳಿಕ ಅಂತಿಮಗೊಳಿಸಬೇಕು. ಬೀದಿ ವ್ಯಾಪಾರಿಗಳ ಸಂಖ್ಯೆ ಮತ್ತಷ್ಟು ಹೆಚ್ಚಿಸಲು ವ್ಯಾಪಾರಿಳೊಂದಿಗೆ ಜತೆ ಚರ್ಚಿಸಬೇಕು. ಅದಕ್ಕೆ ಸಂಬಂಧಿಸಿದ ಕರಡು ನೀತಿಯೊಂದನ್ನು ಈ ವರ್ಷದಲ್ಲೇ ಜಾರಿ ತರಬೇಕು’ ಎಂದು ಆಗ್ರಹಿಸಿದೆ.

‘ಬೀದಿ ವ್ಯಾಪಾರಿಗಳಿಗೆ ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ ನೀಡಬೇಕು. ಮಾರುಕಟ್ಟೆಗಳಿಗೆ ಮೂಲ ಸೌಕರ್ಯಳನ್ನು ಕೊಟ್ಟು ಉದ್ದರಿಸುವುದು ಹೇಗೆ ಎಂಬುದು ಕೂಡ ಕರಡು ನೀತಿಯಲ್ಲಿ ಇರಬೇಕು’ ಎಂದೂ ಒತ್ತಾಯಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT