‘ವಿಚಾರಣೆಯ ಸಲುವಾಗಿ ಶಶಿಕುಮಾರ್ ರನ್ನು ಶುಕ್ರವಾರ ಠಾಣೆಗೆ ಕರೆಸಲಾಗಿತ್ತು. ಪೊಲೀಸರು ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದರು. ಈ ಸಂದರ್ಭ ವ್ಯಕ್ತಿಯು ಸೀಮೆಎಣ್ಣೆ ಕುಡಿದು ಆತ್ಮಹತ್ಯೆಗೆ ಯತ್ನಿಸಿದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ರಮೇಶ್ ತಿಳಿಸಿದರು.