ನಗರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತುಮಂಗಳವಾರ ಆಯೋಜಿಸಿದ್ದ ಪ್ರೊ.ಸಿ.ಎಚ್.ಮರಿದೇವರು ಪ್ರತಿಷ್ಠಾನ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರೈತ ಸಮುದಾಯ ಸಂಪೂರ್ಣವಾಗಿ ಬಿಕ್ಕಟ್ಟಿಗೆ ಸಿಲುಕಿಕೊಂಡಿದೆ. ಸಾಲಮನ್ನಾ ಮಾಡಿದ್ದರೂ, ಮಾಡುತ್ತಿದ್ದರೂ ಅವರ ಬದುಕು ಸುಧಾರಣೆಯಾಗುತ್ತಿಲ್ಲ. ಬದಲಿಗೆ, ಆರ್ಥಿಕ, ನೈತಿಕ ಹಾಗೂ ಸಾಂಸ್ಕೃತಿಕವಾಗಿ ದಿವಾಳಿಯಾಗಿರುವುದು ನೋವಿನ ಸಂಗತಿ’ ಎಂದರು.