ಹುಬ್ಬಳ್ಳಿ: ನಗರದ ನೆಹರೂ ಮೈದಾನದಲ್ಲಿ ಫೆಬ್ರುವರಿ 17ರಂದು ನಡೆಯಬೇಕಿದ್ದ ರೈತ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಎನ್.ಎಚ್. ಕೋನರಡ್ಡಿ ಹಾಗೂ ಪಕ್ಷದ ರೈತ ಘಟಕದ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ತಿಳಿಸಿದ್ದಾರೆ.
ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವುದು. ಬೆಳಗಾವಿ ವಿಭಾಗದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಎಲ್ಲ ತಾಲ್ಲೂಕುಗಳ ರೈತರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.