ತಾಲ್ಲೂಕಿನ ಮುರಗುಂಡಿ ಗ್ರಾಮದ ಬಳಿ ಸಂಕೇಶ್ವರ–ಜೇವರ್ಗಿ ರಸ್ತೆಯಲ್ಲಿ 5 ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಆ ಸ್ಥಳದಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬೆಳಗಾವಿಗೆ ಬಂದು ರೈತರ ಕಬ್ಬಿನ ಬಿಲ್ ಬಾಕಿ ಕುರಿತು ಚರ್ಚಿಸಿದ್ದರೆ, ಸಮಸ್ಯೆಯನ್ನು ಪರಿಹರಿಸಿದ್ದರೆ ರೈತರು ಬೀದಿಗಿಳಿದು ಹೋರಾಡುವ ಸ್ಥಿತಿ ಬರುತ್ತಿರಲಿಲ್ಲ’ ಎಂದರು.