ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ನಾಯ್ಕ್‌ ವಿರುದ್ಧ ದೂರು ದಾಖಲು

ಬಿಜೆಪಿಯ ನಾಲ್ವರು ಕಾರ್ಯಕರ್ತರ ಬಂಧನ
Last Updated 11 ಏಪ್ರಿಲ್ 2019, 20:39 IST
ಅಕ್ಷರ ಗಾತ್ರ

ವಾಡಿ (ಕಲಬುರ್ಗಿ ಜಿಲ್ಲೆ): ಚಿತ್ತಾಪುರ ತಾಲ್ಲೂಕು ಕುಂಬಾರಹಳ್ಳಿಯಲ್ಲಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್‌ ಕಾರಿಗೆ ಬುಧವಾರ ಕಲ್ಲು ತೂರಿ, ಅದರಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಜೆಪಿಯ ನಾಲ್ವರು ಕಾರ್ಯಕರ್ತರನ್ನುಬಂಧಿಸಿದ್ದಾರೆ.

‘ಸಚಿವರು ಪ್ರಚಾರಕ್ಕೆ ತೆರಳಿದ್ದಾಗ ಕಾರು ಅಡ್ಡಗಟ್ಟಿ ಹಲ್ಲೆ ಮಾಡಿ ಕೊಲೆ ಯತ್ನ ನಡೆಸಲಾಯಿತು’ ಎಂದು ಪೇಠಶಿರೂರ ತಾಲ್ಲೂಕು ಪಂಚಾಯಿತಿ ಸದಸ್ಯ ನಾಮದೇವ ರಾಠೋಡ ಅವರು, ಬಿಜೆಪಿಯ ವಾಲ್ಮೀಕ್‌ ರಾಠೋಡ ಹಾಗೂ ಇತರರ ವಿರುದ್ಧ ದೂರು ನೀಡಿದ್ದರು.

‘ಹೆಂಡ ಹಂಚಲು ಬಂದಿದ್ದರು ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ಮತಹಾಕಿ ಎಂದು ಬಲವಂತ ಮಾಡುತ್ತಿದ್ದರು’ ಎಂದು ಆರೋಪಿಸಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ್‌ ಹಾಗೂ ಕಾಂಗ್ರೆಸ್‌ ಪಕ್ಷದ ಹಲವರ ವಿರುದ್ಧ ಬಿಜೆಪಿ ಕಾರ್ಯಕರ್ತ ವಸಂತ ಶಂಕರ ಚವ್ಹಾಣ ಪ್ರತಿ ದೂರು ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT