ಆನೇಕಲ್: ಚಂದಾಪುರ ಸೂರ್ಯಸಿಟಿ ಪೊಲೀಸ್ ಠಾಣೆ ವ್ಯಾಪ್ತಿ ಬನಹಳ್ಳಿ ರಾಘವೇಂದ್ರ ಬಡಾವಣೆಯಲ್ಲಿ ಬುಧವಾರ ರಾತ್ರಿ ಫರ್ನಿಚರ್ ತಯಾರಿಕಾ ಘಟಕಕ್ಕೆ ಪಟಾಕಿಯ ಕಿಡಿ ಬಿದ್ದು ಬೆಂಕಿ ಹೊತ್ತುಕೊಂಡು ನಾಲ್ಕು ಅಂತಸ್ತಿನ ಕಟ್ಟಡ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಇದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಲೆಬಾಳುವ ವಸ್ತುಗಳು ಸುಟ್ಟುಹೋಗಿವೆ.