ಕಳೆದ ವರ್ಷ ಮುಂಬೈನ ಪಬ್ನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಿಂದ ಎಚ್ಚೆತ್ತಿದ್ದ ಅಗ್ನಿಶಾಮಕ ದಳದ ಅಧಿಕಾರಿ ಗಳು, ಅಗ್ನಿ ಸುರಕ್ಷತಾ ಕ್ರಮ ಕೈಗೊಳ್ಳದ ಪಬ್ ಹಾಗೂ ಬಾರ್ ಆ್ಯಂಡ್ ರೆಸ್ಟೋರೆಂಟ್ಗಳನ್ನು ಪತ್ತೆ ಹಚ್ಚಿ ನೋಟಿಸ್ ನೀಡಿದ್ದರು. ಅಷ್ಟಾದರೂ ಮಾಲೀಕರು, ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡಿರಲಿಲ್ಲ. ಅದೇ ಕಾರಣಕ್ಕೆಅಗ್ನಿಶಾಮಕ ದಳದ ಅಧಿಕಾರಿಗಳು, ‘ರಾಷ್ಟ್ರೀಯ ಕಟ್ಟಡ ನೀತಿ’ಯ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿಪಬ್ ಹಾಗೂ ಬಾರ್ ಆ್ಯಂಡ್ ರೆಸ್ಟೋರೆಂಟ್ ಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.