‘ಕರಕಲಗಡ್ಡಿ ಪ್ರದೇಶದ ಜನರ ಜತೆ ನಿರಂತರ ಸಂಪರ್ಕದಲ್ಲಿದ್ದು, ಅವರು ಸುರಕ್ಷಿತವಾಗಿದ್ದಾರೆ. ಹೆಚ್ಚುತ್ತಿರುವ ಪ್ರವಾಹ ಹಾಗೂಹವಾಮಾನ ವೈಪರೀತ್ಯದಿಂದಾಗಿ ಅವರನ್ನು ಕರೆತರಲು ಸಾಧ್ಯವಾಗುತ್ತಿಲ್ಲ. ಆದರೂ, ಕರೆತರುವ ಪ್ರಯತ್ನ ಮುಂದುವರಿಸಿದ್ದೇವೆ’ ಎಂದುಉಪ ವಿಭಾಗಾಧಿಕಾರಿ ರಾಜಶೇಖರ ಡಂಬಳ ಹೇಳಿದರು. ನಡುಗಡ್ಡೆಗಳಾದಮ್ಯಾದರಗಡ್ಡಿಯಿಂದ 18 ಹಾಗೂ ವಂಕಮ್ಮನಗಡ್ಡಿಯಿಂದ ಐವರನ್ನು ಸುರಕ್ಷಿತ ಪ್ರದೇಶಕ್ಕೆ ಕರೆತರಲಾಗಿದೆ. ಎನ್ಡಿಆರ್ಎಫ್ ಹಾಗೂ ಸೇನಾಪಡೆಯ ತಂಡ ಜಿಲ್ಲೆಯಲ್ಲಿ ಬೀಡುಬಿಟ್ಟವೆ.