ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದಇದೇ 23ರವರೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗೆ ಸಂಬಂಧಿಸಿದ ಆನ್ಲೈನ್ ಸೇವೆಗಳನ್ನು ತಡೆ ಹಿಡಿಯಲಾಗಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ನೀತಿ ಸಂಹಿತೆ ಜಾರಿಗೊಂಡ ದಿನದಿಂದಲೂ ಸೇವೆಗಳನ್ನು ತಡೆ ಹಿಡಿಯಲಾಗಿದೆ. ಹೀಗಾಗಿ ಆನ್ಲೈನ್ನಲ್ಲಿ ಯಾವುದೇ ಸೇವೆ ಸಿಗುತ್ತಿಲ್ಲ. ಸರ್ವರ್ ಡೌನ್ ಕಾರಣಕ್ಕೆ ಈ ರೀತಿ ಆಗಿಲ್ಲ ಎಂದು ಅವರು ಹೇಳಿದರು.